ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

🌺⭕ ಕದಂಬರು ⭕🌺

⭕ ಕದಂಬರು ⭕

  • ಕರ್ನಾಟಕದಲ್ಲಿ ಮೊದಲು ಹುಟ್ಟು ಹಾಕಿದ ಕನ್ನಡ ಸಾಮ್ರಾಜ್ಯ - ಕದಂಬರು .
  • ಕದಂಬರು ಆಳಿದ್ದ ಕ್ರಿ.ಶ.4 ನೇ ಶತಮಾನದಿಂದ 6 ನೇ ಶತಮಾನದವರೆಗೆ
  • ಕದಂಬರ ರಾಜಧಾನಿ - ಬನವಾಸಿ .
  • ಬನವಾಸಿ ಪ್ರಸ್ತುತ ಈ ಜಿಲ್ಲೆಯಲ್ಲಿದೆ - ಉತ್ತರ ಕನ್ನಡ .
  • ಕದಂಬರ ವಂಶದ ಸ್ಥಾಪಕ ದೊರೆ - ಮಯೂರ ವರ್ಮ .
  • ಕದಂಬರ ಲಾಂಛನ - ಸಿಂಹ .
  • ಕದಂಬರ ಧ್ವಜ - ವಾನರ .
  • ಮಹಾಭಾರತ ಕಾಲದಲ್ಲಿ ಬನವಾಸಿಯನ್ನು ಈ ಹೆಸರಿನಿಂದ ಕರೆಯಲಾಗುತ್ತಿತ್ತು - ವೈಜಯಂತಿ ಅಥವಾ ವನವಾಸಿ .
  • ಟಾಲೆಮಿಯು ತನ್ನ ಕೃತಿ Geography ಯಲ್ಲಿ ಬನವಾಸಿಯನ್ನು ಈ ಹೆಸರಿನಿಂದ ಕರೆದಿದ್ದಾನೆ - ಬೈಜಾಂಟಿಯನ್ .


ಕದಂಬರ ಮೂಲ :-
A . ದೈವಾಂಶ ಸಿದ್ದಾಂತ
b. ನಾಗ ಸಿದ್ದಾಂತ
c. ಜೈನ ಸಿದ್ದಾಂತ
d.ನಂದಾ ಮೂಲ
e. ತಮಿಳು ಮೂಲ
f. ಕನ್ನಡ ಮೂಲ

  • ಕದಂಬರ ಮೂಲ ಪುರುಷ - ಮಯೂರ ವರ್ಮ .
  • ಮಯೂರವರ್ಮನ ತಂದೆಯ ಹೆಸರು - ವೀರಶರ್ಮ .
  • ಮಯೂರವರ್ಮನ ಗುರುವಿನ ಹೆಸರು - ವೀರಶರ್ಮ .
  • ಮಯೂರವರ್ಮನನ್ನ ಅವಮಾನಿಸಿದ ಕಂಚಿಯ ಪಲ್ಲವ ದೊರೆ - ಶಿವಸ್ಕಂದ ವರ್ಮ .
  • ಚಂದ್ರವಳ್ಳಿ ಶಾಸನದ ಕರ್ತೃ - ಮಯೂರವರ್ಮ
  • ಚಂದ್ರವಳ್ಳಿಯ ಬಳಿ ಕೆರೆಯನ್ನು ನಿರ್ಮಿಸಿದ ಕದಂಬ ದೊರೆ - ಮಯೂರವರ್ಮ
  • ಮಯೂರವರ್ಮನ ಸೈನಿಕ ಸಾಧನೆಯನ್ನು ತಿಳಿಸುವ ಶಾಸನ - ಚಂದ್ರವಳ್ಳಿ ಶಾಸನ .
  • ಕರ್ನಾಟಕದ ಪ್ರಥಮ ಚಕ್ರವರ್ತಿ ಎಂಬ ಹೆಗ್ಗಳಿಕೆಗೆ ಪಾತ್ರನಾದ ಅರಸ - ಮಯೂರವರ್ಮ
  • ಮಯೂರವರ್ಮನ ನಂತರ ಕದಂಬ ವಂಶವನ್ನು ಆಳಿದವರು - ಕಂಗವರ್ಮ .
  • ಧರ್ಮರಾಜ , ಧರ್ಮಮಹಾರಾಜ ಎಂಬ ಬಿರುದನ್ನು ಧರಿಸಿದ್ದ ಕದಂಬ ದೊರೆ - ಕಾಕುಸ್ಥವರ್ಮ .
  • ಕನ್ನಡದ ಮೊಟ್ಟ ಮೊದಲ ಶಾಸನ - ಹಲ್ಮಿಡಿ ಶಾಸನ .
  • ಹಲ್ಮಿಡಿ ಶಾಸನದ ಕರ್ತೃ - ಕಾಕುಸ್ಥವರ್ಮ .
  • ತಾಳಗುಂದ ಶಾಸನದ ಕರ್ತೃ - ಕಾಕುಸ್ಥವರ್ಮ .
  • ಕದಂಬರ ರಾಜ್ಯಾಡಳಿತದಲ್ಲಿ ರಾಜನಿಗೆ ಆಡಳಿತದಲ್ಲಿ ಸಹಾಯ ಮಾಡುತ್ತಿದ್ದ ಮಂತ್ರಿಮಂಡಳವನ್ನು ಈ ಹೆಸರಿನಿಂದ ಕರೆಯುವರು - ಪಂಚಪ್ರಧಾನರು .
  • ಪ್ರಧಾನ ಮಂತ್ರಿ - ಪ್ರಧಾನ
  • ಅರಮನೆಯ ವ್ಯವಹಾರಗಳ ಮಂತ್ರಿ - ಮನೆಸೇರ್ಗಡೆ .
  • ವಿದೇಶಾಂಗ ವ್ಯವಹಾರಗಳ ಮಂತ್ರಿ - ತಂತ್ರ ಪಾಲ .
  • ತಾಂಬೂಲ ಪಾರು ಪತ್ಯಗಾರ - ಕ್ರಮುಖ ಪಾಲ .
  • ಮಂತ್ರಿಮಂಡಲದ ಪ್ರಧಾನ ಕಾರ್ಯ ದರ್ಶಿ - ಸಭಾಕಾರ್ಯ ಸಚಿವ .
  • ಕದಂಬರ ಆಡಳಿತದಲ್ಲಿ ಜಿಲ್ಲೆಯ ಮುಖ್ಯಸ್ಥನನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಮನ್ನೇಯ .
  • ಪಟ್ಟಣ್ಣದ ಾಡಳಿತ ನೋಡಿಕೊಳ್ಳುತ್ತಿದ್ದವನು - ಪಟ್ಟಣ್ಣ ಸ್ವಾಮಿ .
  • ಕದಂಬರು ಹೊರೆಗಳ ಮೇಲೆ ವಿಧಿಸುತ್ತಿದ್ದ ತೆರಿಗೆಯನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಪೇರ್ಜುಂಕ .
  • ವ್ಯಾಪಾರ ತೆರಿಗೆಯನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಬಿಲ್ ಕೊಡೆ .
  • ಸಾರಿಗೆ ತೆರಿಗೆಯನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಕಿರುಕುಳ .
  • ಗೆರಿಲ್ಲಾಯುದ್ಧ ತಂತ್ರಕ್ಕೆ ಹೆಸರಾಗಿದ್ದ ದಕ್ಷಿಣ ಭಾರತದ ಮನೆತನ - ಕದಂಬರು .
  • ಕದಂಬರ ಕೂಟ ಯುದ್ದವನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಗೆರಿಲ್ಲಾ .
  • ಕದಂಬರ ಸಮಾಜದಲ್ಲಿದ್ದ ಕುಟುಂಬ ಪದ್ದತಿ - ಮಾತೃ ಪ್ರಧಾನ , ಅವಿಭಕ್ತ ಕುಟುಂಬ ಪದ್ದತಿ .
  • ಕದಂಬ ಸಾಮ್ರಾಜ್ಯವು ಈ ಲಕ್ಷಮಗಳನ್ನು ಹೊಂದಿತ್ತು - ಭಾರತೀಕರಣ .
  • ಕದಂಬರು ಈ ಧರ್ಮದ ಅವಲಂಬಿಗಳು - ವೈದಿಕ ಧರ್ಮ .
  • ಕದಂಬರ ಕುಲದೇವರು - ತಾಳಗುಂದದ ಪ್ರಾಣೇಶ್ವರ .
  • ಕದಂಬರ ಮನೆಯ ದೇವರು - ಬನವಾಸಿಯ ಮಧಕೇಶ್ವರ .
  • ಕದಂಬರ ಕಾಲದಲ್ಲಿ ಬನವಾಸಿಗೆ ಆಗಮಿಸಿದ ಚೀನೀಯಾತ್ರಿಕ - ಹ್ಯೂಯನ್ ತ್ಸಾಂಗ್ .
  • ಕದಂಬರ ಮುಖ್ಯ ವೃತ್ತಿ - ವ್ಯವಸಾಯ .
  • ಕದಂಬರ ಕಾಲದ ಭ ಕಂದಾಯ ಪದ್ದತಿ - ಸರ್ವ ನಮಸ್ಯ , ತ್ರೀಬೋಗ , ಹಾಗೂ ತಾಳವೃತ್ತಿ.
  • ಕದಂಬರ ರೇವು ಪಟ್ಟಣ್ಣಗಳು - ಗೋವಾ , ಮಂಗಳೂರು , ಹೊನ್ನವರ , ಅಂಕೋಲ ಹಾಗೂ ಭಟ್ಕಳ
  • ಕದಂಬರ ವಿಶಿಷ್ಠ ಕೊಡುಗೆಗಳು - ನಾಣ್ಯ ಪದ್ದತಿ .
  • ಕದಂಬರು ಬಿಡುಗಡೆ ಮಾಡಿದ ಬೆಳ್ಳಿ ನಾಣ್ಯದ ಹೆಸರು - ಪದ್ಮಟಂಕ .
  • ಕದಂಬರ ಪ್ರಮುಖ ನಾಣ್ಯಗಳು - ಗದ್ಯಾಣ , ದ್ರುಮ್ಮ , ಪಮ , ಸುವರ್ಣ ,
  • ಕದಂಬರ ಕಾಲದ ಶಿಕ್ಷಣ ಪದ್ದತಿ - ಗುರುಕುಲ ಶಿಕ್ಷಮ ಪದ್ದತಿ ,
  • “ ಘಟಿಕ ಸಾಹಸಿ ” ಎಂಬ ಬಿರಿದನ್ನು ಪಡೆಯುತ್ತಿದ್ದವರು - ಘಟಕದಲ್ಲಿ ಓದಿದ ವಿಧ್ಯಾರ್ಥಿಗಳಿಗೆ .
  • ಇಲ್ಲಿ ಉಚಿತ ಊಟೋಪಚಾರದ ವ್ಯವಸ್ಥೆ ಇತ್ತು - ಬಳ್ಳಿಗಾಮೆ , ತಾಳಗುಂದ , ಬನವಾಸಿ ಹಾಗೂ ಅಗ್ರಹಾರ .
  • ಕದಂಬರ ಕಾಲದ ಪ್ರಸಿದ್ದ ವಿದ್ಯಾ ಕೇಂದ್ರ - ಕಂಚಿ .
  • ಕದಂಬರ ಆರಂಭದ ಶಾಸನಗಳು ಈ ಭಾಷೆಯಲ್ಲಿದೆ - ಪ್ರಾಕೃತ .
  • ತಾಳಗುಂದ ಶಾಸನದ ಕರ್ತೃ - ಕವಿ ಕುಬ್ಜ ( ಶಾಂತಿ ವರ್ಮ ಬರೆಯಿಸಿದ )
  • “ ಮದನ ತಿಲಕ ” ಕೃತಿಯ ಕರ್ತೃ - ಚಂದ್ರರಾಜ .
  • ಚಂದ್ರ ಚೂಡಾ ಮಣಿ ಕೃತಿಯ ಕರ್ತೃ - ನಾಗವರ್ಮ .
  • “ ಸುಕುಮಾರ ಚರಿತೆ ” ಯ ಕರ್ತೃ - ಶಾಂತಿನಾಥ
  • “ ಕೌಂತಳೇಶ್ವರ ದೌತ್ಯಂ ” ಕೃತಿಯ ಕರ್ತೃ - ಎರಡನೇ ಕಾಳಿದಾಸ .
  • “ ಕದಂಬ ಶೈಲಿ ” ಎಂಬ ವಾಸ್ತುಶಿಲ್ಪ ಶೈಲಿಯನ್ನು ಸೃಷ್ಠಿಸಿದವರು - ಕದಂಬರು .
  • ಕದಂಬರ ಆರಂಭದ ರಚನೆ - ಮೃಗೇಶ ವರ್ಮನು ರಚಿಸಿದ ಜೈನ ಬಸದಿ .
  • ದಕ್ಷಿಣ ಭಾರತದಲ್ಲಿಯೆ ಮೊಟ್ಟ ಮೊದಲನೆಯ ಪ್ರಾಚೀನ ದೇವಾಲಯಗಳ ಕಲಾಕೃತಿ - ತಾಳಗುಂದದ ಪ್ರಣವೇಶ್ವರ ದೇವಾಲಯ .
  • ಹಲ್ಮಿಡಿ ಶಾಸನ ಈ ಜಿಲ್ಲೆಯಲ್ಲಿ ದೊರೆಯುತ್ತದೆ - ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲ್ಮಿಡಿ ಗ್ರಾಮ .
  • ಮಯೂರ ವರ್ಮನನ್ನು “ ದ್ವೀಜೋತಮ ” ನೆಂದು ತಿಳಿಸಿರುವ ಶಾಸನದ ಹೆಸರು - ಮಳವಳ್ಳಿ ಶಾಸನ .
  • ಕಂಚಿಯಿಂದ ಹೊರನಡೆದ ಮಯೂರವರ್ಮನು ಮೊದಲು ಶಸ್ತ್ರಸ್ತ್ರ ಪಡೆಯನ್ನು ಕಟ್ಟಿದ ಪ್ರದೇಶ - ಶ್ರೀ ಶೈಲ
  • “ಧರ್ಮ ಮಹಾರಾಜಾಧಿರಾಜ ” ಎಂಬ ಬಿರದ್ದನ್ನು ಹೊಂದಿದ್ದ ಕದಂಬರ ಅರಸ - ಕಂಗವರ್ಮ ಅಥಾವ ಕೊಂಗುಣಿ ವರ್ಮ .
  • ತಾಳಗುಂದ ಶಾಸನ ಈ ಜಿಲ್ಲೆಯಲ್ಲಿ ದೊರಕಿದೆ - ಶಿವಮೊಗ್ಗ .
  • ಕನ್ನಡವನ್ನು ಆಡಳಿತ ಭಾಷೆಯನ್ನಾಗಿ ಮಾಡಿದ ಕದಂಬ ದೊರೆ - ಕಾಕುಸ್ಥವರ್ಮ .
  • ಮೃಗೇಶನ ಮತ್ತೊಂದು ರಾಜಧಾನಿ - ಹಲಸಿ .
  • ಕದಂಬರ ಪ್ರಾಂತ್ಯದ ಘಟಕಗಳು - ಕಂಪಣ .
  • ಟಂಕ ಹಾಗೂ ಗಧ್ಯಾಣ ಎಂಬ ನಾಣ್ಯಗಳನ್ನು ಚಲಾವಣಿಗೆ ತಂದ ಮೊದಲಿಗರು - ಕದಂಬರು .
  • ಚಂದ್ರವಳ್ಳಿಯ ಶಾಸನ ಈ ಜಿಲ್ಲೆಯಲ್ಲಿ ದೊರೆತಿದೆ - ಚಿತ್ರದುರ್ಗ .
  • ಬ್ರಾಹ್ಮಿಲಿಪಿಯಲ್ಲಿರುವ ಪ್ರಪ್ರಥಮ ಸಂಸ್ಕೃತ ಶಾಸನ - ಚಂದ್ರವಳ್ಳಿ ಶಾಸನ .
  • ಮಹಾಭಾರತದಲ್ಲಿ ಬನವಾಸಿಯನ್ನು ಈ ಹೆಸರಿನಿಂದಲೂ ಕರೆದ್ದಿದ್ದಾರೆ - ಕುಂತಲ ದೇಶ .
  • ಪ್ರಣವೇಶ್ವರನ ಹೆಸರಿನಲ್ಲಿ ಕೆರೆಯನ್ನ ಕಟ್ಟಿಸಿದ ದೊರೆ - ಕಾಕುಸ್ಥವರ್ಮ .
  • ಕದಂಬರು ಈ ನದಿಯ ದಡದಲ್ಲಿ ತಮ್ಮ ರಾಜ್ಯವನ್ನ ಸ್ಥಾಪಿಸಿದರು - ವರದಾ ನದಿ .
  • ತಾಳಗುಂದದ ಪ್ರಾಚೀನ ಹೆಸರು - ಸ್ಥಣ ಕುಂದೂರು
  • ಕರ್ನಾಟಕದ ಅತ್ಯಂತ ಪ್ರಾಚೀನ ಸಂಸ್ಕೃತ ಶಾಸನ - ಚಂದ್ರವಳ್ಳಿ ಶಾಸನ
  • ಮಯೂರವರ್ಮನು ವಿಧ್ಯಾಭ್ಯಾಸಕ್ಕಾಗಿ ಹೋದ ವಿದ್ಯಾಕೇಂದ್ರ - ಕಂಚಿ
  • ಕದಂಬರ ಈ ದೊರೆಯನ್ನು ಕುಂತಳ ರಾಜ್ಯದ ಏಕಮಾತ್ರ ದೊರೆ ಎಂದು ಹೇಳಲಾಗಿದೆ - ಭಗೀರಥ ವರ್ಮ
  • ಗುಪ್ತರೊಂದಿಗೆ ವೈವೈಹಿಕ ಸಂಬಂಧ ಹೊಂದಿದ್ದ ಕದಂಬ ದೊರೆ - ಕಾಕುಸ್ಥ ವರ್ಮ
  • ಕದಂಬರ ಕೊನೆಯ ದೊರೆ - ಹರಿವರ್ಮ -
  • ಕದಂಬರ ಆಳ್ವಿಕೆಯನ್ನು ಕೊನೆಗಾಣಿಸಿದ ಸಾಮ್ರಾಜ್ಯ - ಬಾದಾಮಿ ಚಾಲುಕ್ಯರು
  • ತಾಳಗುಂದ ಶಾಸನವು ಈ ಅರಸರನ್ನು “ ಆಬರಣ ” ಎಂದು ಬಣ್ಣಿಸಿದೆ - ಕಾಕುಸ್ಥ ವರ್ಮ
  • ಹಲ್ಮಿಡಿ ಶಾಸನದ ಕಾಲ - ಕ್ರಿ.ಶ.450
ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ

:: ನಮ್ಮ ಎಲ್ಲಾ Social Media links ::

 ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ ..












ಧನ್ಯವಾದಗಳು :

ಟೀಮ್ ಎಜ್ಯೂಟ್ಯೂಬ್ ಕನ್ನಡ





Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area